ಕರ್ನಾಟಕ ಸಂಗೀತ
ಉಪಕರಣಗಳು
Actions
ಸಾಮಾನ್ಯ
ಮುದ್ರಿಸು/ರಫ್ತು ಮಾಡು
ಇತರೆ ಯೋಜನೆಗಳಲ್ಲಿ
ಕರ್ನಾಟಕ ಸಂಗೀತ | |
---|---|
ಪರಿಕಲ್ಪನೆಗಳು | |
ಸಂಗೀತ ರಚನೆಗಳು | |
ವರ್ಣಮ್ • ಕೃತಿ • ಗೀತಂ • ಸ್ವರಜತಿ • ರಾಗಂ ತಾನಂ ಪಲ್ಲವಿ • ತಿಲ್ಲಾನ | |
ಸಂಗೀತೋಪಕರಣಗಳು | |
ಮಾಧುರ್ಯ: ಸರಸ್ವತಿ ವೀಣೆ • ವೇಣು • ಪಿಟೀಲು • ಚಿತ್ರ ವೀಣ • ನಾದಸ್ವರ • ಮ್ಯಾಂಡೊಲಿನ್ ತಾಳ: ಮೃದಂಗ • ಘಟಂ • ಮೋರ್ಸಿಂಗ್ • ಕಂಜೀರ • ತವಿಲ್ ಝೇಂಕಾರ: ತಂಬೂರ • ಶ್ರುತಿ ಪಟ್ಟಿಗೆ | |
ಸಂಗೀತಕಾರರು | |
ಕರ್ನಾಟಕ ಸಂಗೀತ (ಸಂಸ್ಕೃತ: कर्णाटक संगीतम्) ದಕ್ಷಿಣ ಭಾರತದ ಶಾಸ್ತ್ರೀಯ ಸಂಗೀತ. ಭಾರತದ ಶಾಸ್ತ್ರೀಯ ಸಂಗೀತದ ಇನ್ನೊಂದು ಮುಖ್ಯ ಪದ್ಧತಿಯಾದ ಹಿಂದುಸ್ತಾನಿ ಸಂಗೀತದಿಂದ ಇದರ ಮುಖ್ಯ ವ್ಯತ್ಯಾಸವೆಂದರೆ ವ್ಯವಸ್ಥಿತ ರಚನೆಗಳ ಹೆಚ್ಚಿನ ಪ್ರಾಮುಖ್ಯತೆ ಮತ್ತು ಇನ್ನೂ ಬಿಗಿಯಾದ ನಿಯಮಗಳ ಅಸ್ತಿತ್ವ. ಕರ್ನಾಟಕ ಸಂಗೀತ ಹೆಚ್ಚು-ಕಡಿಮೆ ಸಂಪೂರ್ಣವಾಗಿ ಭಕ್ತಿಪ್ರಧಾನವಾದದ್ದು. ರಚನೆಗಳು ಸಾಮಾನ್ಯವಾಗಿ ಹಿಂದೂ ದೇವ-ದೇವತೆಗಳನ್ನು ಕುರಿತವು. ಜಾತ್ಯತೀತ ರಚನೆಗಳು ಸಾಮಾನ್ಯವಾಗಿ ಹಾಸ್ಯಪ್ರಧಾನ, ಮಕ್ಕಳ ಹಾಡುಗಳು, ಇಲ್ಲವೇ ಚಿತ್ರಗೀತೆಗಳು. ಭಾರತೀಯ ಸಂಗೀತದ ಎಲ್ಲ ಮುಖ್ಯ ಪದ್ಧತಿಗಳಂತೆ, ಕರ್ನಾಟಕ ಸಂಗೀತದ ಎರಡು ಪ್ರಧಾನ ಅಂಶಗಳೆಂದರೆ ರಾಗ (ಶ್ರುತಿಗೆ ಸಂಬಂಧಪಟ್ಟದ್ದು) ಮತ್ತು ತಾಳ(ಸಂಗೀತ) (ಲಯಕ್ಕೆ ಸಂಬಂಧಪಟ್ಟದ್ದು).
ಕರ್ನಾಟಕ ಸಂಗೀತದಲ್ಲಿ ಏಳು ಮೂಲ ಸ್ವರಗಳಿವೆ: ಸ-ರಿ-ಗ-ಮ-ಪ-ದ-ನಿ. ಈ ಏಳು ಸ್ವರಗಳ ದೀರ್ಘ ಹೆಸರುಗಳು ಷಡ್ಜ, ಋಷಭ, ಗಾಂಧಾರ, ಮಧ್ಯಮ, ಪಂಚಮ, ಧೈವತ ಮತ್ತು ನಿಷಾದ. ಸ ಮತ್ತು ಪ ಸ್ವರಗಳನ್ನು ಬಿಟ್ಟರೆ ಉಳಿದವು ಮೂರು ಬೇರೆ ಬೇರೆ ರೂಪಗಳಲ್ಲಿ ಉಂಟಾಗಬಹುದು. ಬದಲಾಗದ ಸ ಮತ್ತು ಪ ಸ್ವರಗಳನ್ನು ಪ್ರಕೃತಿ ಸ್ವರಗಳೆಂದು ಹಾಗೂ ರಿ, ಗ, ಮ, ದ ಮತ್ತು ನಿ ಸ್ವರಗಳನ್ನು ವಿಕೃತಿ ಸ್ವರಗಳೆಂದು ಕರೆಯಲಾಗುತ್ತದೆ. ಸ್ವರ ಸ್ಥಾನಗಳ ಪಟ್ಟಿ ಹೀಗಿದೆ.
ಷಡ್ಜ - ಸ
ಶುದ್ಧ ಋಷಭ - ರಿ೧
ಚತುಶ್ರುತಿ ಋಷಭ - ರಿ೨
ಷಟ್ಶ್ರುತಿ ಋಷಭ - ರಿ೩
ಶುದ್ಧ ಗಾಂಧಾರ - ಗ೧
ಸಾಧಾರಣ ಗಾಂಧಾರ - ಗ೨
ಅಂತರ ಗಾಂಧಾರ - ಗ೩
ಶುದ್ಧ ಮಧ್ಯಮ - ಮ೧
ಪ್ರತಿ ಮಧ್ಯಮ - ಮ೨
ಪಂಚಮ - ಪ
ಶುದ್ಧ ಧೈವತ - ದ೧
ಚತುಶ್ರುತಿ ಧೈವತ - ದ೨
ಷಟ್ಶ್ರುತಿ ಧೈವತ - ದ೩
ಶುದ್ಧ ನಿಷಾದ - ನಿ೧
ಕೈಶಿಕಿ ನಿಷಾದ - ನಿ೨
ಕಾಕಳಿ ನಿಷಾದ - ನಿ೩
ಷಟ್ಶ್ರುತಿ ಋಷಭ ಮತ್ತು ಸಾಧರಣ ಗಾಂಧಾರ ಎರಡು ಸಮನಾದ ಸ್ವರಗಳು ಹಾಗೆಯೆ ಚತುಶ್ರುತಿ ಧೈವತ ಮತ್ತು ಶುದ್ಧ ನಿಷಾದ ಸಮನಾದ ಸ್ವರಗಳು.
ಯಾವುದೇ ಒಂದು ರಾಗದಲ್ಲಿ ಒಂದು ಸ್ವರದ ಒಂದು ರೂಪ ಮಾತ್ರ ಉಂಟಾಗಬಹುದು. ಕೆಲವು "ಹಗುರ" ರಾಗಗಳಲ್ಲಿ (ಉದಾ: ಬೇಹಾಗ್)ಕೆಲವು ಸ್ವರಗಳು ಎರಡು ರೂಪಗಳಲ್ಲಿ ಕಾಣಿಸಿಕೊಳ್ಳಬಹುದು (ಆರೋಹಣದಲ್ಲಿ ಒಂದು ಮತ್ತು ಅವರೋಹಣದಲ್ಲಿ ಒಂದು). ಒಂದು ರಾಗದ ಆರೋಹಣ ಮತ್ತು ಅವರೋಹಣದಲ್ಲಿ ಐದು, ಆರು ಇಲ್ಲವೇ ಏಳು ಸ್ವರಗಳು ಇರಬಹುದು.
ರಾಗ ಎಂಬುದು ಶ್ರುತಿಬದ್ಧವಾದ ರಚನೆಯನ್ನು ಸೃಷ್ಟಿಸಲು ಇರುವ ನಿಯಮಗಳ ವ್ಯವಸ್ಥೆ. ಪ್ರತಿ ರಾಗವೂ ಈ ಕೆಳಗಿನ ಅಂಶಗಳನ್ನು ಹೊಂದಿರುತ್ತದೆ.
..ಇತ್ಯಾದಿ.
ತಾಳ ಎಂಬುದು ಸಂಗೀತ ರಚನೆಗಳ ಲಯವಿನ್ಯಾಸವನ್ನು ನಿರ್ದೇಶಿಸುತ್ತದೆ. ಸಂಗೀತದಲ್ಲಿ ಸಮಯದ ಮೂಲಮಾನಕ್ಕೆ ಮಾತ್ರೆ ಎಂದು ಹೆಸರು. ಸಂಗೀತಗಾರರು ತಮ್ಮ ಕೈಯನ್ನು ಒಂದು ನಿರ್ದಿಷ್ಟ ರೀತಿಯಲ್ಲಿ ತಟ್ಟುವುದರ ಮೂಲಕ (ತಾಳ ಹಾಕುವುದು) ಈ ಲಯದ ಲೆಕ್ಕವಿಟ್ಟು ಕೊಳ್ಳುತ್ತಾರೆ. ತಾಳ ಸಮಯದ ಲೆಕ್ಕವನ್ನೂ ಇಟ್ಟುಕೊಳ್ಳಲು ಉಪಯೋಗವಾಗುತ್ತದೆ. ತಾಳಗಳನ್ನು ಏಳು ಗುಂಪುಗಳಾಗಿ ವರ್ಗೀಕರಿಸಲಾಗಿದೆ: ಧ್ರುವ, ಮಠ್ಯ, ರೂಪಕ, ಝಂಪೆ, ತ್ರಿಪುಟ, ಅಟ್ಟ, ಏಕ. ಕರ್ನಾಟಕ ಸಂಗೀತದಲ್ಲಿ ತಾಳವನ್ನು ತೋರಿಸಲು ಸಾಮಾನ್ಯವಾಗಿ ಉಪಯೋಗಿಸುವ ವಾದ್ಯ ಮೃದಂಗ.
ಕರ್ನಾಟಕ ಸಂಗೀತದ ಬಹುಪಾಲು ಕೃತಿಗಳು ಕನ್ನಡ ಅಥವಾ ಸಂಸ್ಕೃತ ಭಾಷೆಯಲ್ಲಿವೆ. ತೆಲುಗು ಮತ್ತು ತಮಿಳು ಸಹ ಕೃತಿಗಳ ರಚನೆಯಲ್ಲಿ ಉಪಯೋಗಿಸಲ್ಪಟ್ಟ ಭಾಷೆಗಳು. ಕರ್ನಾಟಕ ಸಂಗೀತದ ಕೃತಿಗಳಲ್ಲಿ ಪ್ರಸಿದ್ಧವಾದ ಕೆಲವೆಂದರೆ-
ಕೀರ್ತನೆಗಳು ಸಾಮಾನ್ಯವಾಗಿ ಮೂರು ಭಾಗಗಳನ್ನು ಹೊಂದಿರುತ್ತವೆ:
ಕೆಲವು ಕೀರ್ತನೆಗಳಲ್ಲಿ ಅನುಪಲ್ಲವಿ ಮತ್ತು ಚರಣದ ನಡುವೆ ಚಿಟ್ಟೆಸ್ವರ ಎಂಬ ಭಾಗವಿರುತ್ತದೆ (ಉದಾ: "ಸಾರಸಮುಖಿ ಸಕಲ ಭಾಗ್ಯದೆ..."). ಚಿಟ್ಟೆಸ್ವರದಲ್ಲಿ ಪದಗಳಿಲ್ಲದೆ ಕೇವಲ ಸ್ವರಗಳು ಮಾತ್ರ ಇರುತ್ತವೆ. ಕೆಲವು ಬಾರಿ ಕೃತಿಯನ್ನು ರಚಿಸಿರುವ ವಾಗ್ಗೇಯಕಾರರೇ ಚಿಟ್ಟೆ ಸ್ವರವನ್ನೂ ರಚಿಸಿದ್ದರೆ, ಇನ್ನು ಕೆಲವೆಡೆ ನಂತರ ಬಂದ ಇತರ ಸಂಗೀತ ವಿದ್ವಾಂಸರು ಚಿಟ್ಟೆಸ್ವರವನ್ನು ಸೇರಿಸಿರುವುದೂ ಉಂಟು. ಇನ್ನು ಕೆಲವು ಕೀರ್ತನೆಗಳಲ್ಲಿ ಚರಣದ ನಂತರ ಮಧ್ಯಮ ಕಾಲ ಎಂಬ ಭಾಗವಿರುತ್ತದೆ. ಮಧ್ಯಮ ಕಾಲವನ್ನು ಸಾಮಾನ್ಯವಾಗಿ ದ್ವಿಗುಣ ವೇಗದಲ್ಲಿ ಹಾಡಲಾಗುತ್ತದೆ.
ಸಾಮಾನ್ಯವಾಗಿ ಸಂಗೀತ ಕಛೇರಿಗಳಲ್ಲಿ ಪೂರ್ವ ತಯಾರಿಯಿಲ್ಲದೆ ಸಂಗೀತಗಾರರ ಮನೋಧರ್ಮಕ್ಕನುಗುಣವಾಗಿ ಪರಿಚಯಿಸಲ್ಪಡುವ ಅಂಶಗಳಿರುತ್ತವೆ. ಸರಾಸರಿ ಒಂದು ಕಛೇರಿಯ ಶೇ.೮೦ ಭಾಗ ಈ ರೀತಿಯ ಮನೋಧರ್ಮ ಸಂಗೀತವನ್ನು ಒಳಗೊಂಡಿರುತ್ತದೆ. ನಾಲ್ಕು ಪ್ರಮುಖ ರೀತಿಯ ಮನೋಧರ್ಮ ಸಂಗೀತವನ್ನು ಗುರುತಿಸಲಾಗಿದೆ:
ಇದು ಸಾಮಾನ್ಯವಾಗಿ ಒಂದು ಕೃತಿಯ ಆರಂಭದಲ್ಲಿ ಹಾಡಲಾಗುತ್ತದೆ (ವಾದ್ಯಗಳ ಸಂದರ್ಭದಲ್ಲಿ ನುಡಿಸಲಾಗುತ್ತದೆ). ಇದು ಕೇಳುಗರಲ್ಲಿ ಆ ಕೃತಿಯನ್ನು ಹಾಡಲ್ಪಡುವ ರಾಗದ ಭಾವವನ್ನು ಮೂಡಿಸುವ ಉದ್ದೇಶವನ್ನು ಹೊಂದಿರುತ್ತದೆ. ನಿಧಾನವಾಗಿ ಮುಂದೆ ಸಾಗುವ ಈ ಹಂತ, ತಾಳದ ಬದ್ಧತೆಯಿಲ್ಲದೆ ರಾಗದ ವಿವಿಧ ಗುಣಗಳನ್ನು ಪ್ರದರ್ಶಿಸುತ್ತದೆ. ಆ ರಾಗದ ಜೀವ ಸ್ವರಗಳನ್ನು ಆಧಾರವಾಗಿಟ್ಟುಕೊಂಡು, ವಿವಿಧ ಹಂತಗಳಲ್ಲಿ ವಿಸ್ತರಿಸಲ್ಪಡುತ್ತದೆ. ಸಾಮಾನ್ಯವಾಗಿ ಮಂದ್ರಸ್ಥಾಯಿಯಿಂದ ಆರಂಭವಾಗುವ ಈ ರಾಗ ಪರಿಚಯದ ಪದ್ಧತಿ ಕೆಲಕಾಲ ಅಲ್ಲಿಯೇ ನೆಲೆಸಿ ಅಲ್ಲಿಂದ ಮಧ್ಯಮಸ್ಥಾಯಿಗೆ ಬಂದು ಅಲ್ಲಿ ಪ್ರಕೃತಿ ಸ್ವರವಿದ್ದರೆ ಅದರ ಆಧಾರದ ಮೇಲೆ ಸ್ವಲ್ಪ ಹೊತ್ತು ವಿಶ್ರಮಿಸಿ ಮುಂದೆ ತಾರಸ್ಥಾಯಿಗೆ ಯಾವ ಅಡಚಣೆಯೂ ಇಲ್ಲದೆ ಸುಲಭವಾಗಿ ತೇಲಿದಂತೆ ಮೇಲೇರುತ್ತದೆ. ತಾರಸ್ಥಾಯಿಯಲ್ಲಿ ರಾಗದ ಎಲ್ಲಾ ಗುಣಗಳನ್ನೂ, ರೂಪಗಳನ್ನೂ ಅನಾವರಣಗೊಳಿಸಿ ನಂತರ ಮತ್ತೆ ಮಧ್ಯಮಸ್ಥಾಯಿಗೆ ಬಂದು ಅಲ್ಲಿಂದ ಜಾರಿದಂತೆ ಮಂದ್ರಕ್ಕೆ ಇಳಿಸು ಒಂದು ದೀರ್ಘ ನಿಲುಗಡೆಯೊಡನೆ ನಿಲ್ಲುತ್ತದೆ.
ಈ ಹಂತವನ್ನು ಹೆಚ್ಚು ಅನುಭವವುಳ್ಳ ಸಂಗೀತಗಾರರು ಮಾತ್ರ ಉಪಯೋಗಿಸುತ್ತಾರೆ. ಕೃತಿಯ ಯಾವುದಾದರೂ ಒಂದೆರಡು ಸಾಲುಗಳನ್ನು ವಿಧ ವಿಧವಾಗಿ ಪುನಃ ಪುನಃ ಆವರ್ತಿಸಿ ರಾಗ ಮತ್ತು ತಾಳದ ಗುಣಗಳನ್ನು ಮತ್ತು ವಿವಿಧ ಅಲಂಕಾರಗಳನ್ನು ಪ್ರದರ್ಶಿಸಲಾಗುತ್ತದೆ. ಇದು ಪೂರ್ಣ ವಾಗಿ ಸಂಗೀತಗಾರನ ಪ್ರತಿಭೆಯನ್ನು ಪ್ರದರ್ಶಿಸುತ್ತದೆ.
ಎಲ್ಲಕ್ಕಿಂತ ಸರಳ ರೀತಿಯ ಮನೋಧರ್ಮ ಸಂಗೀತ; ಈ ಹಂತದಲ್ಲಿ ಅನೇಕ ಕಲ್ಪನಾ ಸ್ವರಗಳ ಪುಂಜಗಳನ್ನು ಹಾಡಲಾಗುತ್ತದೆ. ಈ ಪುಂಜಗಳಲ್ಲಿ ಸ್ವರಗಳು ಜೋಡಣೆಗೊಳ್ಳುವ ಕ್ರಮ ಆ ರಾಗದ ನಿಯಮಗಳನ್ನು ಅವಲಂಬಿಸಿರುತ್ತದೆ. ಪ್ರತಿಯೊಂದು ರಾಗಕ್ಕೂ ಅದರದೇ ಆದ ಒಂದು ಓಟ ಮತ್ತು ವಿಧ ಇದೆ. ಯಾವುದೇ ರಾಗದ ವಿಸ್ತರಣೆಯಾದರೂ ಸರಿ, ಕಲ್ಪನಾ ಸ್ವರರಚನೆಯಾದರೂ ಸರಿ ಅದು ನಿರ್ಬಂಧಿಸಿದ ಆ ಚೌಕಟ್ಟಿನ ಒಳಗೇ ಇರಬೇಕು.
ಈ ಹಂತವನ್ನು ಮೊಟ್ಟ ಮೊದಲು ವೀಣೆಯ ಮೇಲೆ ನುಡಿಸಲಿಕ್ಕಾಗಿ ಬೆಳೆಸಲಾಯಿತು. "ಅನಂತಮ್" ಎಂಬ ಪದವನ್ನು ಪುನಃ ಪುನಃ ವಿಶೇಷ ಅಲಂಕಾರಗಳೊಂದಿಗೆ ಆವರ್ತಿಸಲಾಗುತ್ತದೆ. "ಅನಂತಮಾನಂತಮಾನಂತ...." ಎಂಬುದು "ತಾನಮ್ತಾನಮ್ತಾನಮ್..." ಎಂದು ಪದಾಂತರವಾಗಿದೆ.
ಇದು ರಾಗ ಆಲಾಪನೆ, ತಾನ ಮತ್ತು ನೆರವಲ್ ಗಳನ್ನು ಒಳಗೊಂಡ ಸಂಯುಕ್ತ ಹಂತ. ನೆರವಲ್ ಹಂತದ ನಂತರ ಪಲ್ಲವಿಯನ್ನು ಎರಡು ಬಾರಿ ಪುನರಾವರ್ತಿಸಿ, ನಂತರ ಅರ್ಧ ವೇಗದಲ್ಲಿ ಆವರ್ತಿಸಿ, ಮತ್ತೆ ದ್ವಿಗುಣ ವೇಗದಲ್ಲಿ ಮತ್ತು ನಾಲ್ಕರಷ್ಟು ವೇಗದಲ್ಲಿ ಪುನರಾವರ್ತಿಸಲಾಗುತ್ತದೆ.
ಬಹುಪಾಲು ಕರ್ನಾಟಕ ಸಂಗೀತದ ಕಛೇರಿಗಳು ಈ ಕೆಳಗಿನ ವ್ಯವಸ್ಥೆಯನ್ನು ಅನುಸರಿಸುತ್ತವೆ.
ಶ್ರೀ ಪುರಂದರದಾಸರು ಕರ್ನಾಟಕ ಸಂಗೀತದ ಪಿತಾಮಹರು. ಮುಂದೆ ತ್ಯಾಗರಾಜರಂಥ ಸಂಗೀತಗಾರರಿಗೆ ಸ್ಫೂರ್ತಿ ತಂದ ಪುರಂದರದಾಸರು ತಾಳ ವ್ಯವಸ್ಥೆಯ ಮೂಲಭೂತ ಸಿದ್ಧಾಂತವನ್ನೂ ಪ್ರತಿಪಾದಿಸಿದರು.
ಶ್ರೀ ತ್ಯಾಗರಾಜರು (೧೭೫೯-೧೮೪೭), ಮುತ್ತುಸ್ವಾಮಿ ದೀಕ್ಷಿತರು (೧೭೭೬-೧೮೨೭) ಮತ್ತು ಶ್ಯಾಮಾ ಶಾಸ್ತ್ರಿಗಳು(೧೭೬೨-೧೮೨೭) - ಈ ಮೂವರು ವಾಗ್ಗೇಯಕಾರರನ್ನು ಕರ್ನಾಟಕ ಸಂಗೀತದ ತ್ರಿಮೂರ್ತಿಗಳು ಎಂದು ಪರಿಗಣಿಸಲಾಗುತ್ತದೆ.
ಆಧುನಿಕ ಹಾಡುಗಾರರಲ್ಲಿ ಪ್ರಸಿದ್ಧರಾದ ಕೆಲವರೆಂದರೆ ಎಂ.ಎಸ್.ಸುಬ್ಬುಲಕ್ಷ್ಮಿ, ಡಾ.ಬಾಲಮುರಳಿಕೃಷ್ಣ, ಡಿ.ಕೆ ಪಟ್ಟಮ್ಮಾಳ್, ಕೆ.ಜೆ.ಯೇಸುದಾಸ್, ಶೆಮ್ಮಂಗುಡಿ ಶ್ರೀನಿವಾಸ ಅಯ್ಯರ್ ಮೊದಲಾದವರು. ಇನ್ನೂ ಇತ್ತೀಚಿನ ಆಧುನಿಕ ಹಾಡುಗಾರರಲ್ಲಿ ಪ್ರಸಿದ್ಧರಾದವರು ಅರುಣಾ ಸಾಯಿರಾಮ್,ಸುಧಾ ರಘುನಾಥನ್,ಬಾಂಬೆ ಜಯಶ್ರೀ, ಸಂಜಯ್ ಮೊದಲಾದವರು.
ವಾದ್ಯಗಳಲ್ಲಿ ಪರಿಣತಿ ಪಡೆದ ಆಧುನಿಕ ಸಂಗೀತಗಾರರಲ್ಲಿ ಮೈಸೂರು ದೊರೆಸ್ವಾಮಿ ಅಯ್ಯಂಗಾರ್ (ವೀಣೆ), ಟಿ. ಚೌಡಯ್ಯ, ಲಾಲ್ಗುಡಿ ಜಯರಾಮನ್, ಕೋಲಾರದ ಕೊಳ್ಳೆಗಾಲ ಗೊಪಾಲಕೃಷ್ಣ (ವಯೊಲಿನ್), ಕದ್ರಿ ಗೋಪಾಲನಾಥ್ (ಸ್ಯಾಕ್ಸೊಫೋನ್) ಮೊದಲಾದವರು ಪ್ರಸಿದ್ಧರು. ಇನ್ನೂ ಇತ್ತೀಚೆಗೆ ರವಿಕಿರಣ್ (ಚಿತ್ರವೀಣೆ), ಯು ಶ್ರೀನಿವಾಸ್ (ಮ್ಯಾಂಡೊಲಿನ್) ಮೊದಲಾದವರು ಹೆಸರು ಪಡೆದಿದ್ದಾರೆ.
ಜನ್ಯ ರಾಗಗಳು | |
---|---|
A-D | |
G-K | |
M-N |
|
R-T |
|
U-V |
|
|