ಬಿಜಾಪುರ (ಲೋಕ ಸಭೆ ಚುನಾವಣಾ ಕ್ಷೇತ್ರ)

(ವಿಜಯಪುರ ಲೋಕಸಭಾ ಕ್ಷೇತ್ರ ಇಂದ ಪುನರ್ನಿರ್ದೇಶಿತ)

ವಿಜಯಪುರ ಲೋಕಸಭಾ ಕ್ಷೇತ್ರವು ಕರ್ನಾಟಕದ 28 ಲೋಕ ಸಭೆ ಚುನಾವಣಾ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರವಾಗಿದೆ . ಕ್ಷೇತ್ರವು 2008ರಿಂದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ನೀಡಲಾಗಿದೆ.. ಲೋಕಸಭಾ ಕ್ಷೇತ್ರ(2018)ದಲ್ಲಿ 8,81,422 ಪುರುಷರು ಹಾಗೂ 8,32,396 ಮಹಿಳೆಯರು ಸೇರಿ ಒಟ್ಟು 17,13,818 ಮತದಾರರಿದ್ದಾರೆ.

ರಮೇಶ ಜಿಗಜಿಣಗಿ, ಪ್ರಸ್ತುತ ಸಂಸದರು

ಕ್ಷೇತ್ರದ ಇತಿಹಾಸ

ವಿಜಯಪುರ ಲೋಕ ಸಭೆ ಚುನಾವಣಾ ಕ್ಷೇತ್ರವು ಆದಿಲ್‌ಶಾಹಿ ಅರಸರ ರಾಜಧಾನಿಯಾಗಿತ್ತು . ಸೂಫಿ ಸಂತರ ಪ್ರಭಾವದ ನೆಲೆ, ಜಗದ್ವಿಖ್ಯಾತ ಗೋಳಗುಮ್ಮಟ, ಐತಿಹಾಸಿಕ ಇಬ್ರಾಹಿಂ ರೋಜಾ,(ಮಿನಿ ತಾಜಮಹಲ್ ) ಭಾರ ಕಮಾನ್‌ ಸೇರಿದಂತೆ ಅತ್ಯದ್ಭುತ ವಾಸ್ತುಶೈಲಿಯ ಸ್ಮಾರಕಗಳಿವೆ.

ಹನ್ನೆರಡನೇ ಶತಮಾನದಲ್ಲಿ ಕಲ್ಯಾಣದಲ್ಲಿ ನಡೆದ ಮಹಾಕ್ರಾಂತಿಯ ನಂತರ ಶಿವಶರಣ ಹರಳಯ್ಯ 63 ಶರಣರೊಂದಿಗೆ ಶೇಗುಣಸಿ ಗ್ರಾಮದ ಹೊರ ವಲಯದಲ್ಲಿ ಕೆಲ ಕಾಲ ತಂಗಿದ್ದ ಐತಿಹ್ಯ ಇಲ್ಲಿನ ಹರಳಯ್ಯನ ಗುಂಡಿ ಇದೆ. ಬೇಸಿಗೆ ಕಾಲದಲ್ಲಿಯೂ ಬತ್ತದ ಈ ಬಾವಿ ಈಗಲೂ ಇದೆ. ಮಮದಾಪುರದಲ್ಲಿ ಆದಿಲ್‌ಶಾಹಿ ಅರಸರು ಕಟ್ಟಿಸಿದ ಸುಂದರ ಕೆರೆ ಶತ ಶತಮಾನಗಳ ಕಾಲ ವಿಶಿಷ್ಟ ತಳಿಯ ಭತ್ತ ಬೆಳೆಯಲು ಆಸರೆಯಾಗಿತ್ತು ಎಂಬುದು ಇಲ್ಲಿನ ಐತಿಹ್ಯ.

ಬಬಲೇಶ್ವರದ ಶ್ರೀ ಗುರುಪಾದೇಶ್ವರ ಬೃಹನ್ಮಠಕ್ಕೆ ತನ್ನದೇಯಾದ ಪರಂಪರೆಯಿದೆ. ಕಾಖಂಡಕಿಯ ಮಹಿಪತಿದಾಸರ ಪರಂಪರೆ ರಾಜ್ಯದಲ್ಲೇ ಹೆಸರುವಾಸಿ. ಕಾಖಂಡಕಿ ಗ್ರಾಮದಲ್ಲಿ ಮಹಿಪತಿದಾಸರ ಬೃಂದಾವನವಿದೆ. ಕಾರಹುಣ್ಣಿಮೆ ಸಂದರ್ಭ ಇಲ್ಲಿ ನಡೆಯುವ ಓರಿ ಓಡಿಸುವ ಸ್ಪರ್ಧೆ ಮೈಮನ ರೋಮಾಂಚನಗೊಳಿಸುತ್ತದೆ. ಪ್ರಸಿದ್ಧ ಅರಕೇರಿ ಶ್ರೀ ಅಮೋಘ ಸಿದ್ಧೇಶ್ವರ ದೇವಾಲಯ, ಕಂಬಾಗಿ ಮತ್ತು ಹಲಗಣಿ ಗ್ರಾಮದ ಹಣಮಂತ ದೇವಾಲಯಗಳು, ಐತಿಹಾಸಿಕ ಬಬಲಾದಿಯ ಶ್ರೀ ಗುರು ಚಕ್ರವರ್ತಿ ಸದಾಶಿವ ಮಠ, ಐತಿಹಾಸಿಕ ಬೆಳ್ಳುಬ್ಬಿಯ ಮಳೇಮಲ್ಲೇಶ್ವರ ದೇವಾಲಯ, ಐತಿಹಾಸಿಕ ಉಪ್ಪಲದಿನ್ನಿಯ ಸಂಗಮೇಶ್ವರ ದೇವಾಲಯ ಹಾಗೂ ದೇವರ ಗೆಣ್ಣೂರನ ಮಹಾಲಕ್ಷ್ಮಿ ದೇವಾಲಯಗಳಿವೆ. ಪ್ರಸಿದ್ಧ ದೇಸಗತಿ ಮನೆತನ ಬಬಲೇಶ್ವರ ತಾಲ್ಲೂಕಿನ ಜೈನಾಪುರ ಗ್ರಾಮದಲ್ಲಿ ವಾಸವಾಗಿದ್ದರು .

ಒಂದೆಡೆ ಹೊಳಿ ದಂಡೆ. ಸಮೃದ್ಧಿಯ ಕೃಷಿ ಚಿತ್ರಣ. ಇನ್ನೊಂದೆಡೆ ಎತ್ತರದ ಪ್ರದೇಶ. ಹನಿ ಹನಿ ನೀರಿಗೂ ತತ್ವಾರ. ಮಳೆಯಾಶ್ರಿತ ಬೆಳೆ ಪದ್ಧತಿ. ಕೃಷ್ಣೆ–ಡೋಣಿ ಹರಿಯುವಿಕೆ. ಸಾರವಾಡ ಸುತ್ತಮುತ್ತಲಿನ ಬಿಳಿಜೋಳ ಎಲ್ಲೆಡೆ ಪ್ರಸಿದ್ಧಿ. ಕೃಷ್ಣಾ ನದಿ ತೊಟದ ಕಬ್ಬು ಬೆಳೆಗಾರರಿಗಾಗಿ ಜಿಲ್ಲೆಯ ಇತಿಹಾಸದಲ್ಲೇ ಆರಂಭಗೊಂಡ ಮೊದಲು ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ, ಕೃಷ್ಣಾನಗರದಲ್ಲಿದೆ. ರಜತ ಮಹೋತ್ಸವ ಕಂಡ ಈ ಕಾರ್ಖಾನೆ ರೈತರ ಆರ್ಥಿಕಾಭಿವೃದ್ಧಿಯ ಬೆನ್ನೆಲುಬಾಗಿದೆ. ಇದರಂತೆ ಹತ್ತಾರು ಸಕ್ಕರೆ ಕಾರ್ಖಾನೆಗಳು ಆರಂಭಗೊಂಡಿವೆ. ತಿಕೋಟಾ ಭಾಗ ದ್ರಾಕ್ಷಿಯ ಕಣಜ ಎಂದೇ ಖ್ಯಾತವಾಗಿದೆ. ವಿದೇಶಕ್ಕೂ ಇಲ್ಲಿನ ದ್ರಾಕ್ಷಿ ರಫ್ತಾಗುತ್ತಿದೆ. ಲಿಂಬೆ ಹಣ್ಣಿನ ಖಣಜವಾದ ಇಂಡಿ ತಾಲ್ಲೂಕಿನಿಂದ ದೇಶ-ವಿದೇಶಕ್ಕೂ ನಿಂಬೆ ಹಣ್ಣು ರಫ್ತಾಗುತ್ತಿದೆ.

ಅವಿಭಜಿತ ವಿಜಯಪುರ ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿರುವ ಬಿಎಲ್‌ಡಿಇ ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಬಂಥನಾಳದ ಸಂಗನಬಸವ ಶಿವಯೋಗಿಗಳ ಕಾರ್ಯಕ್ಷೇತ್ರ. ಲಚ್ಯಾಣದ ಕಮರಿಮಠದ ಸಿದ್ಧಲಿಂಗ ಮಹಾರಾಜರು ನೆಲೆಸಿದ ನೆಲೆವೀಡು. ಶತ ಶತಮಾನಗಳ ಹಿಂದೆಯೇ ಪ್ರಸಿದ್ಧ ವಿದ್ಯಾಕೇಂದ್ರ ಸಾಲೋಟಗಿಯಲ್ಲಿತ್ತು ಎಂಬ ಐತಿಹ್ಯ. ಸಾಧು–ಸಂತರು ಜನ್ಮ ತಾಳಿದ ಸುಕ್ಷೇತ್ರ. ಶಿಲಾಯುಗ ಸೇರಿದಂತೆ ರಾಮಾಯಣ ಕಾಲಘಟ್ಟದ ಇತಿಹಾಸ. ಪುರಾತನ ಸ್ಥಳ ಎಂಬ ಉಲ್ಲೇಖವೂ ಈಜಿಪ್ಟ್‌ನ ಖ್ಯಾತ ಭೂಗೋಳ ಶಾಸ್ತ್ರಜ್ಞ ಟಾಲೆಮಿ ರಚಿತ ಗ್ರಂಥದಲ್ಲಿ ದಾಖಲಾಗಿದೆ. 12ನೇ ಶತಮಾನದಲ್ಲಿ ಕಲ್ಯಾಣಿ ಚಾಲುಕ್ಯರಿಂದ ನಿರ್ಮಿಸಲ್ಪಟ್ಟ ದೇವರನಾವದಗಿ ಶ್ರೀ ಸಂಗಮೇಶ್ವರ ದೇವಾಲಯ ಐತಿಹಾಸಿಕ ಪ್ರಸಿದ್ಧಿ ಪಡೆದಿದೆ. ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟದ ರೂವಾರಿ ರಮಾನಂದ ನೀರ್ಥರ ನೆಲೆಯೂ ಹೌದು.

ಹನ್ನೆರಡನೇ ಶತಮಾನದ ಶರಣ ಶ್ರೇಷ್ಠ ಬಸವಣ್ಣನವರ ಧರ್ಮ ಪತ್ನಿ ನೀಲಾಂಬಿಕೆ ಐಕ್ಯರಾದ ಸ್ಥಳ ತಂಗಡಗಿ. ವಿಜಯನಗರ ಸಾಮ್ರಾಜ್ಯ ಪತನಕ್ಕೆ ಕಾರಣೀಭೂತವಾದ ಯುದ್ಧ ನಡೆದಿದ್ದು ರಕ್ಕಸಗಿ-ತಂಗಡಗಿಯಲ್ಲೇ. ತಾಳಿಕೋಟಿ ಸಮೀಪದ ಮಿಣಜಗಿಯ ಪರ್ಸಿ(ತಾರಸಿ) ಎಲ್ಲೆಡೆ ಪ್ರಸಿದ್ಧಿ. ವಚನ ಕ್ರಾಂತಿಯ ಹರಿಕಾರ ಬಸವಣ್ಣ. ಅವರು ಹುಟ್ಟಿದ, ಲಿಂಗೈಕ್ಯರಾದ ಸ್ಥಳವಾಗಿರುವುದರಿಂದ ಪುಣ್ಯಕ್ಷೇತ್ರವಾಗಿಯೂ, ಪ್ರವಾಸಿ ತಾಣವಾಗಿಯೂ ಪ್ರಸಿದ್ಧಿವಾಗಿದೆ . 12 ನೇ ಶತಮಾನದಲ್ಲಿ ವಚನ ಸಾಹಿತ್ಯದ ಮೂಲಕ ಜಾತಿ ವ್ಯವಸ್ಥೆಯ ವಿರುದ್ಧ ಸಮರ ಸಾರಿದ, ಸಾಮಾಜಿಕ ಜಾಗೃತಿಗೆ ಮುನ್ನುಡಿ ಬರೆದ ಬಸವಣ್ಣನವರು ಲಿಂಗೈಕ್ಯರಾದ ಕೂಡಲ ಸಂಗಮವು ಬಾಗಲಕೋಟೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ಕೇಂದ್ರಗಳಲ್ಲೊಂದು.

ಕೃಷ್ಣಾ ನದಿಗೆ ಕಟ್ಟಲಾದ ಆಲಮಟ್ಟಿ ಜಲಾಶಯ ಏಷ್ಯಾ ಖಂಡದಲ್ಲೇ ಅತೀ ದೊಡ್ಡದು ಎಂಬ ಖ್ಯಾತಿ ಗಳಿಸಿದೆ. ಇಲ್ಲಿನ ಇಳಕಲ್ಲು ಸೀರೆ ಮತ್ತು ಖಾದಿ ಬಟ್ಟೆ ದೇಶದಲ್ಲೇ ಪ್ರಸಿದ್ಧಿ ಪಡೆದಿದೆ. ಕ್ಷೇತ್ರದಲ್ಲಿ ಸಾಕಷ್ಟು ಲಂಬಾಣಿ ಜನಾಂಗವನ್ನು ಕಾಣಬಹುದು. ಈತ್ತಿಚೆಗಷ್ಟೇ ತಲೆ ಎತ್ತಿರುವ ದೇಶಕ್ಕೆ ಬೆಳಕು ನೀಡುವ ಮಹತ್ವಾಕಾಂಕ್ಷೆಯ ಎನ್‌ಟಿಪಿಸಿ ಕೂಡಗಿ ಉಷ್ಣ ವಿದ್ಯುತ್ ಯೋಜನೆ ಕೂಡ ಈ ಕ್ಷೇತ್ರದಲ್ಲೇ ಇದೆ.

ಕ್ಷೇತ್ರದ ವಿಶೇಷತೆ

  • ವಿಜಯಪುರ ಲೋಕ ಸಭೆ ಚುನಾವಣಾ ಕ್ಷೇತ್ರವನ್ನು 1951 - 1967ವರೆಗೆ ಬಿಜಾಪುರ ಉತ್ತರ ಲೋಕ ಸಭೆ ಚುನಾವಣಾ ಕ್ಷೇತ್ರವೆಂದು ಕರೆಯುತ್ತಿದ್ದರು.
  • 1951ರಲ್ಲಿ ಮಹಾರಾಷ್ಟ್ರ ರಾಜ್ಯದ ಸಾಂಗಲಿ ಜಿಲ್ಲೆಯ ಜತ್ತ ವಿಧಾನಸಭೆ ಕ್ಷೇತ್ರವು ವಿಜಯಪುರ ಲೋಕ ಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿತ್ತು.
  • ಸ್ವಾತಂತ್ರ ಭಾರತದ ನಂತರದಲ್ಲಿ ಕಾಂಗ್ರೆಸ್‍ ಪಕ್ಷವು 9 ಬಾರಿ, ನಂತರದ ಸ್ಥಾನದಲ್ಲಿ ಬಿಜೆಪಿ 5 ಬಾರಿ ವಿಜಯಿಯಾಗಿದೆ.
  • ಬಾಂಬೆ ರಾಜ್ಯದ ಅಧೀನದಲ್ಲಿದ್ದಾಗ 1951ರಲ್ಲಿ ಉತ್ತರ ಪ್ರದೇಶದಿಂದ ವಲಸೆ ಬಂದು ವಿಜಯಪುರದಲ್ಲಿ ನೆಲೆಸಿರುವ ರಾಜಾರಾಮ ಗಿರಿಧರಲಾಲ ದುಬೆಯವರು ಕಾಂಗ್ರೆಸ್‍ನಿಂದ ಪ್ರ-ಪ್ರಥಮ ಬಾರಿಗೆ ಆಯ್ಕೆಯಾದರು.
  • 2ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ 1957ರಲ್ಲಿ ಮುರಿಗಪ್ಪ ಸಿದ್ದಪ್ಪ ಸುಗಂಧಿಯವರು ವಿಜಯಪುರ ಲೋಕ ಸಭಾ ಕ್ಷೇತ್ರದಿಂದ ಕರ್ನಾಟಕ ರಾಜ್ಯದಲ್ಲಿಯೇ ಮೊದಲ ಬಾರಿಗೆ ಪಕ್ಷೇತರವಾಗಿ ಆಯ್ಕೆಯಾದ ಸಂಸದರಾಗಿ ದಾಖಲೆ ಬರೆದಿದ್ದಾರೆ. ನಂತರ 1967ರಲ್ಲಿ ಉತ್ತರ ಕನ್ನಡ ಲೋಕ ಸಭೆ ಚುನಾವಣಾ ಕ್ಷೇತ್ರ(ಹಳೆಯ ಕೆನರಾ)ದಿಂದ ದಿನಕರ ದೇಸಾಯಿ(ದಿನಕರ ದತ್ತಾತ್ರೇಯ ದೇಸಾಯಿ) ಪಕ್ಷೇತರವಾಗಿ ಆಯ್ಕೆಯಾದ ಎರಡನೇಯ ಸಂಸದರಾಗಿದ್ದರು. ಅದರಂತೆ ಮಂಡ್ಯ ಲೋಕ ಸಭೆ ಚುನಾವಣಾ ಕ್ಷೇತ್ರದಿಂದ 2019ರಲ್ಲಿ ಸುಮಲತಾರವರು ಪಕ್ಷೇತರವಾಗಿ ಆಯ್ಕೆಯಾದ, ಕರ್ನಾಟಕದ ಮೂರನೇಯ ಹಾಗೂ ಪ್ರಥಮ ಮಹಿಳಾ ಸಂಸದರಾಗಿದ್ದಾರೆ.[೧][೨]
  • 1999ರಲ್ಲಿ ಬಿ.ಕೆ.ಗುಡದಿನ್ನಿಯವರ ಪತ್ನಿಯಾದ ಲಕ್ಷ್ಮಿಬಾಯಿ ಗುಡದಿನ್ನಿಯವರು ಪ್ರಥಮ ಬಾರಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿ ಸೋಲುಂಡರು.[೩]
  • 2009 ಮತ್ತು 2014ರಲ್ಲಿ ರಮೇಶ್ ಜಿಗಜಿಣಗಿಯವರು ಭಾರತೀಯ ಜನತಾ ಪಕ್ಷದಿಂದ ಆಯ್ಕೆಯಾಗಿ ನರೇಂದ್ರ ಮೋದಿ ಮಂತ್ರಿಮಂಡಳದಲ್ಲಿ 2016 - 2019ವರೆಗೆ ಕುಡಿಯುವ ನೀರು ಮತ್ತು ನೈರ್ಮಲಿಕರಣದ ಕೇಂದ್ರ ಮಂತ್ರಿಯಾಗಿದ್ದರು.
  • ಕಾಂಗ್ರೆಸ್‍ನ ಬಿ.ಕೆ.ಗುಡದಿನ್ನಿಯವರು 1967ರಲ್ಲಿ ನಡೆದ ಉಪಚುನಾವಣೆ ಮತ್ತು 1989, 1991ರಲ್ಲಿ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿ ಒಟ್ಟಾರೆ ಮೂರು ಬಾರಿ ಆಯ್ಕೆಯಾಗಿ 1971ರಲ್ಲಿ ಒಂದು ಬಾರಿ ಸೋತಿದ್ದಾರೆ.[೪]
  • ಬಿಜೆಪಿಯಿಂದ ರಮೇಶ್ ಜಿಗಜಿಣಗಿಯವರು 2009, 2014 ಮತ್ತು 2019ರಲ್ಲಿ ಮೂರು ಬಾರಿ ಆಯ್ಕೆಯಾಗಿ ಮೊದಲ ಬಾರಿಗೆ ಹ್ಯಾಟ್ರಿಕ್ ಸಾಧಿಸಿದ್ದಾರೆ.
  • 2019ರಲ್ಲಿ ಜೆಡಿಎಸ್‌ - ಕಾಂಗ್ರೆಸ್‍ನ ಮೈತಿ ಅಭ್ಯರ್ಥಿಯಾಗಿ ಸುನಿತಾ ದೇವಾನಂದ ಚವ್ಹಾಣರವರು ಪ್ರಥಮ ಬಾರಿ ಸ್ಪರ್ಧಿಸಿ ಸೋಲುಂಡರು.
  • 1999ರಿಂದ 2019ರ ವರೆಗೆ ಭಾರತೀಯ ಜನತಾ ಪಕ್ಷದ ಭದ್ರಕೋಟೆಯಾಗಿದೆ.

ವಿಧಾನ ಸಭಾ ಚುನಾವಣಾ ಕ್ಷೇತ್ರಗಳು

ವಿಜಯಪುರ ಲೋಕಸಭಾ ಕ್ಷೇತ್ರವು ಈ ಕೆಳಗಿನ ಎಂಟು ವಿಧಾನಸಭೆ ಕ್ಷೇತ್ರಗಳನ್ನು ಒಳಗೊಂಡಿದೆ.

ವಿಧಾನಸಭೆ ಸಂಖ್ಯೆವಿಧಾನಸಭೆಮೀಸಲಾತಿ
26ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರಸಾಮಾನ್ಯ
27ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರಸಾಮಾನ್ಯ
28ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರಸಾಮಾನ್ಯ
29ಬಬಲೇಶ್ವರ ವಿಧಾನ ಸಭಾ ಕ್ಷೇತ್ರಸಾಮಾನ್ಯ
30ವಿಜಯಪುರ ನಗರ ವಿಧಾನಸಭಾ ಕ್ಷೇತ್ರಸಾಮಾನ್ಯ
31ನಾಗಠಾಣ ವಿಧಾನಸಭಾ ಕ್ಷೇತ್ರಪರಿಶಿಷ್ಟ ಜಾತಿ
32ಇಂಡಿ ವಿಧಾನಸಭಾ ಕ್ಷೇತ್ರಸಾಮಾನ್ಯ
33ಸಿಂದಗಿ ವಿಧಾನಸಭಾ ಕ್ಷೇತ್ರಸಾಮಾನ್ಯ

ಪ್ರಮುಖ ರಾಜಕೀಯ ಪಕ್ಷಗಳು

ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಇದುವರೆಗೆ ಭಾಗವಹಿಸಿದ ಪ್ರಮುಖ ರಾಜಕೀಯ ಪಕ್ಷಗಳು

  • ಜನತಾ ಪಕ್ಷ (JNP)
  • ಜನತಾ ದಳ (JD)
  • ಸ್ವತಂತ್ರ ಪಕ್ಷ(SWA)
  • ಭಾರತೀಯ ಲೋಕ ದಳ (BLD)
  • ಕಿಸಾನ್ ಮಜ್ದೂರ ಪ್ರಜಾ ಪಕ್ಷ (KMPP)
  • ಪಕ್ಷೇತರ(IND)

ಜನಪ್ರತಿನಿಧಿಗಳ ವಿವರ

ಸಂಸತ್ತಿನ ಸದಸ್ಯರ ವಿವರಣೆ

ವರ್ಷಲೋಕ ಸಭಾ ಕ್ಷೇತ್ರವಿಜೇತರುಪಕ್ಷಮತಗಳುಉಪಾಂತ ವಿಜೇತರುಪಕ್ಷಮತಗಳು
ಕರ್ನಾಟಕ ರಾಜ್ಯ
2019ವಿಜಯಪುರ ಲೋಕಸಭಾ ಕ್ಷೇತ್ರರಮೇಶ್ ಜಿಗಜಿಣಗಿBJP635867ಸುನಿತಾ ದೇವಾನಂದ ಚವ್ಹಾಣJDS377829
2014ವಿಜಯಪುರ ಲೋಕಸಭಾ ಕ್ಷೇತ್ರರಮೇಶ್ ಜಿಗಜಿಣಗಿBJP471757ಪ್ರಕಾಶ ರಾಠೋಡINC401938
2009ವಿಜಯಪುರ ಲೋಕಸಭಾ ಕ್ಷೇತ್ರರಮೇಶ್ ಜಿಗಜಿಣಗಿBJP308939ಪ್ರಕಾಶ ರಾಠೋಡINC266535
2004ವಿಜಯಪುರ ಲೋಕಸಭಾ ಕ್ಷೇತ್ರಬಸನಗೌಡ ಪಾಟೀಲ(ಯತ್ನಾಳ)BJP344905ಬಿ.ಎಸ್.ಪಾಟೀಲ(ಮನಗೂಳಿ)INC307372
1999ವಿಜಯಪುರ ಲೋಕಸಭಾ ಕ್ಷೇತ್ರಬಸನಗೌಡ ಪಾಟೀಲ(ಯತ್ನಾಳ)BJP348816ಲಕ್ಷ್ಮಿಬಾಯಿ ಗುಡದಿನ್ನಿINC312177
1998ವಿಜಯಪುರ ಲೋಕಸಭಾ ಕ್ಷೇತ್ರಎಂ.ಬಿ.ಪಾಟೀಲINC261623ಬಸನಗೌಡ ಲಿಂಗನಗೌಡ ಪಾಟೀಲBJP208801
1996ವಿಜಯಪುರ ಲೋಕಸಭಾ ಕ್ಷೇತ್ರಬಸನಗೌಡ ರುದ್ರಗೌಡ ಪಾಟೀಲJD185504ಬಸನಗೌಡ ಪಾಟೀಲ(ಯತ್ನಾಳ)BJP154911
1991ವಿಜಯಪುರ ಲೋಕಸಭಾ ಕ್ಷೇತ್ರಬಿ.ಕೆ.ಗುಡದಿನ್ನಿINC207887ರಾಜಶೇಖರ ಪಟ್ಟಣಶೆಟ್ಟಿBJP140233
1989ವಿಜಯಪುರ ಲೋಕಸಭಾ ಕ್ಷೇತ್ರಬಿ.ಕೆ.ಗುಡದಿನ್ನಿINC306050ಶಿವಶಂಕರಪ್ಪ ಮಲ್ಲಪ್ಪ ಗುರಡ್ಡಿJD182717
1984ವಿಜಯಪುರ ಲೋಕಸಭಾ ಕ್ಷೇತ್ರಶಿವಶಂಕರಪ್ಪ ಮಲ್ಲಪ್ಪ ಗುರಡ್ಡಿJNP206737ಡಾ.ಆರ್.ಬಿ.ಚೌಧರಿINC204318
1980ವಿಜಯಪುರ ಲೋಕಸಭಾ ಕ್ಷೇತ್ರಕೆ.ಬಿ.ಚೌಧರಿINC(I)167091ನಿಂಗಪ್ಪ ಸಿದ್ದಪ್ಪ ಖೇಡJNP156529
1977ವಿಜಯಪುರ ಲೋಕಸಭಾ ಕ್ಷೇತ್ರಕೆ.ಬಿ.ಚೌಧರಿINC(I)173700ಈರಪ್ಪ ಚನ್ನಮಲ್ಲಪ್ಪ ನಾಗಠಾಣBLD152026
ಮೈಸೂರು ರಾಜ್ಯ
1971ವಿಜಯಪುರ ಲೋಕಸಭಾ ಕ್ಷೇತ್ರಭೀಮಪ್ಪ ಎಲ್ಲಪ್ಪ ಚೌಧರಿINC(I)131486ಬಿ.ಕೆ.ಗುಡದಿನ್ನಿINC(O)83798
ಉಪಚುನಾವಣೆ 1968
1968ವಿಜಯಪುರ ಲೋಕಸಭಾ ಕ್ಷೇತ್ರಬಿ.ಕೆ.ಗುಡದಿನ್ನಿINC107997ಆರ್.ಬಿ.ಪಾಟೀಲSWA59089
1967ವಿಜಯಪುರ ಲೋಕಸಭಾ ಕ್ಷೇತ್ರಗುರುಲಿಂಗಪ್ಪ ದೇವಪ್ಪ ಪಾಟೀಲSWA113208ರಾಜಾರಾಮ ಗಿರಿಧರಲಾಲ ದುಬೆINC111104
1962ವಿಜಯಪುರ ಲೋಕಸಭಾ ಕ್ಷೇತ್ರರಾಜಾರಾಮ ಗಿರಿಧರಲಾಲ ದುಬೆINC105452ಮುರಿಗಪ್ಪ ಸಿದ್ದಪ್ಪ ಸುಗಂಧಿSWA63456
1957ವಿಜಯಪುರ ಲೋಕಸಭಾ ಕ್ಷೇತ್ರಮುರಿಗಪ್ಪ ಸಿದ್ದಪ್ಪ ಸುಗಂಧಿIND88209ರಾಜಾರಾಮ ಗಿರಿಧರಲಾಲ ದುಬೆINC77273
ಬಾಂಬೆ ರಾಜ್ಯ
1951ವಿಜಯಪುರ ಲೋಕಸಭಾ ಕ್ಷೇತ್ರರಾಜಾರಾಮ ಗಿರಿಧರಲಾಲ ದುಬೆINC119895ಮುರಿಗಪ್ಪ ಸಿದ್ದಪ್ಪ ಸುಗಂಧಿKMPP44095

ಉಲ್ಲೇಖಗಳು

ಇದನ್ನೂ ನೋಡಿ

🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ